• Latest
ಬಿಜೆಪಿ ಹೋರಾಟ: ಶಿರಸಿಗೆ ತಹಶೀಲ್ದಾರ್ ಭಾಗ್ಯ

ಬಿಜೆಪಿ ಹೋರಾಟ: ಶಿರಸಿಗೆ ತಹಶೀಲ್ದಾರ್ ಭಾಗ್ಯ

4 months ago
Lokayukta raids in Ankola too

ಅಂಕೋಲಾದಲ್ಲಿಯೂ ಲೋಕಾಯುಕ್ತ ದಾಳಿ

3 weeks ago
ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

3 weeks ago
ADVERTISEMENT
ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

3 weeks ago
ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

3 weeks ago
ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

3 weeks ago
Saturday, October 18, 2025
uknews9.com
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
No Result
View All Result
uknews9.com
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
ADVERTISEMENT

ಬಿಜೆಪಿ ಹೋರಾಟ: ಶಿರಸಿಗೆ ತಹಶೀಲ್ದಾರ್ ಭಾಗ್ಯ

uknews9.comby uknews9.com
in ನಮ್ಮೂರು - ನಮ್ಮ ಜಿಲ್ಲೆ
ADVERTISEMENT

ಶಿರಸಿಗೆ ತಹಶೀಲ್ದಾರ್ ನೇಮಕ ಆಗಬೇಕೆಂದು ಆಗ್ರಹಿಸಿ ಸೋಮವಾರ ಕಾರವಾರದಲ್ಲಿ ಬಿಜೆಪಿ ಗ್ರಾಮೀಣ ಮಂಡಲ ಮತ್ತು ಅನಂತಮೂರ್ತಿ ಹೆಗಡೆ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಕಾರವಾರ ಚಲೋಕ್ಕೆ ವಿಜಯ ದೊರಕಿದೆ.

Advertisement. Scroll to continue reading.
https://amzn.to/4moesz2 https://amzn.to/4moesz2 https://amzn.to/4moesz2
ADVERTISEMENT

ಜಿಲ್ಲಾಧಿಕಾರಿಗಳು ಸ್ಥಳದಲ್ಲಿಯೇ (23-06-2025) ಜಾರಿಯಾಗುವಂತೆ, ಶಿರಸಿಯ ಉಪ ತಹಶೀಲ್ದಾರ್ ಆಗಿದ್ದ ರಮೇಶ ಹೆಗಡೆ ಅವರನ್ನು, ಸೋಮವಾರದಿಂದಲೇ ಅನ್ವಯವಾಗುವಂತೆ ತಹಶೀಲ್ದಾರ್ ಗ್ರೇಡ್ 1 ಹೆಚ್ಚುವರಿ ಪ್ರಭಾರಿಯಾಗಿ ನೇಮಕ ಮಾಡಿ ಜಿಲ್ಲಾಧಿಕಾರಿಗಳು ಆದೇಶ ಮಾಡಿದ್ದಾರೆ.

ADVERTISEMENT

ನಾಲ್ಕು ತಿಂಗಳಿAದ ಶಿರಸಿಗೆ ಖಾಯಂ ತಹಶೀಲ್ದಾರ್ ಇಲ್ಲದೇ ಜನಸಾಮಾನ್ಯರಿಗೆ ಅತೀವ ತೊಂದರೆಯಾಗಿತ್ತು. ಈ ಹಿನ್ನೆಲೆಯಲ್ಲಿ ಸಾಮಾಜಿಕ ಹೋರಾಟಗಾರ, ಬಿಜೆಪಿ ರೈತಮೋರ್ಚಾ ಜಿಲ್ಲಾ ಉಪಾಧ್ಯಕ್ಷ ಅನಂತಮೂರ್ತಿ ಹೆಗಡೆ ಕಳೆದ ಮೇ19 ರಂದೇ ಶಿರಸಿಯಲ್ಲಿ ಸಹಾಯಕ ಆಯುಕ್ತರಿಗೆ ಮನವಿ ನೀಡಿ, ಪ್ರತಿಭಟನೆಯ ಎಚ್ಚರಿಕೆಯನ್ನು ನೀಡಿದ್ದರು. ಮತ್ತು ಸಮಯಾವಕಾಶವನ್ನೂ ನೀಡಿದ್ದರು. ಆದರೆ ಅದಾಗಿ ತಿಂಗಳು ಕಳೆದರೂ ತಹಶೀಲ್ದಾರ್ ನೇಮಕಾತಿ ವಿಚಾರ ನಡೆಯದ ಕಾರಣ, ಬಿಜೆಪಿ ಗ್ರಾಮೀಣ ಮಂಡಲದ ವತಿಯಿಂದ ಸೋಮವಾರ ‘ಕಾರವಾರ ಚಲೋ’ ಹೋರಾಟವನ್ನು ಕೈಗೆತ್ತಿಕೊಂಡಿದ್ದರು.

ಈ ವೇಳೆ ಶಿರಸಿ ಗ್ರಾಮೀಣ ಮಂಡಲ ಅಧ್ಯಕ್ಷೆ ಉಷಾ ಹೆಗಡೆ ಮಾತನಾಡಿ, ವಿಸ್ತಾರವಾಗಿರುವ ಶಿರಸಿ ತಾಲೂಕಿಗೆ ನಾಲ್ಕು ತಿಂಗಳಿAದ ದಂಡಾಧಿಕಾರಿ ಇಲ್ಲದಿರುವುದರಿಂದ ಜನಸಾಮಾನ್ಯರಿಗೆ, ಶಾಲಾ ಮಕ್ಕಳಿಗೆ , ಬಡವರಿಗೆ ಅತೀವ ತೊಂದರೆಯಾಗುತ್ತಿದೆ. ಸ್ಥಳೀಯ ಶಾಸಕರಿಗೆ ಇದ್ಯಾವುದರ ಅರಿವೇ ಇಲ್ಲ. ಜನರಿಗೆ ಜನನ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ ಸೇರಿದಂತೆ ಎಲ್ಲ ದಾಖಲಾತಿಗಳ ಪಡೆಯಲು ಜನರು ಹೈರಾಣಾಗುತ್ತಿದ್ದಾರೆ. ಕಣ್ಣು-ಕಿವಿ-ಬಾಯಿ ಇಲ್ಲದ ಕುರುಡು ಸರಕಾರ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರವಾಗಿದೆ. ಈ ಕೂಡಲೇ ಶಿರಸಿಗೆ ಖಾಯಂ ತಹಶೀಲ್ದಾರ್ ಅವರನ್ನು ನೇಮಕ ಮಾಡಲು ಸರಕಾರವನ್ನು ಅವರು ಒತ್ತಾಯಿಸಿದರು.

ಬಿಜೆಪಿ ರೈತಮೋರ್ಚಾ ಜಿಲ್ಲಾಧ್ಯಕ್ಷ ರಮೇಶ ನಾಯ್ಕ ಕುಪ್ಪಳ್ಳಿ ಮಾತನಾಡಿ, ಕಳೆದ 4 ತಿಂಗಳಿAದ ಶಿರಸಿಗೆ ತಹಶೀಲ್ದಾರ್ ಇಲ್ಲದೆ ಸಮಸ್ಯೆ ಆಗಿದೆ. ಮಾನ್ಸೂನ್ ಆರಂಭವಾಗಿ ಅದಾಗಲೇ 1 ತಿಂಗಳಾಗುತ್ತ ಬಂದಿದೆ. ಭಾಶಿ ಹಾಗೂ ಚಿಗಳ್ಳಿ ಭಾಗದಲ್ಲಿ ಪ್ರವಾಹ ಭೀತಿ ಎದುರಾಗಿದೆ. ಇನ್ನು ಒಂದೆರಡು ದಿನ ಮಳೆ ಮುಂದುವರೆದರೆ ಅನಾಹುತಗಳಾಗುತ್ತವೆ. ಇಂತಹ ಸಂದರ್ಭದಲ್ಲಿ ಖಾಯಂ ತಹಸೀಲ್ದಾರ್ ಇಲ್ಲ. ಈ ಕೂಡಲೇ ತಹಶೀಲ್ದಾರ್ ನೇಮಕ ಮಾಡಬೇಕೆಂದು ಆಗ್ರಹಿಸಿದರು.

ಮತ್ತೀಘಟ್ಟ ಗ್ರಾಪಂ ಸದಸ್ಯ ನಾರಾಯಣ ಹೆಗಡೆ ಮಾತನಾಡಿ, ಕಾಂಗ್ರೆಸ್ ಸರಕಾರದಲ್ಲಿ ಜನರು ಕಣ್ಣು ಮುಚ್ಚಿ ನಿದ್ರೆ ಮಾಡುವಂತಿಲ್ಲವಾಗಿದೆ. ಮತ್ತೀಘಟ್ಟ ರಸ್ತೆ ಸಮಸ್ಯೆಯ ವಿಚಾರದಲ್ಲಿಯೂ ನಮ್ಮ ಹೋರಾಟದ ಫಲವಾಗಿ ಇದೀಗ ಕೆಲಸ ನಡೆಯುತ್ತಿದೆ. ಸರಕಾರ ಜನರ ಕುಂದು-ಕೊರತೆಗಳನ್ನು ಆಲಿಸಿ ಪರಿಹರಿಸಬೇಕು ಎಂದರು.

ಬಿಜೆಪಿ ಗ್ರಾಮೀಣ ಮಂಡಲದ ವತಿಯಿಂದ ಹಮ್ಮಿಕೊಂಡಿದ್ದ ಈ ಕಾರವಾರ ಚಲೋ ಹೋರಾಟದಲ್ಲಿ ಬಿಜೆಪಿ ಪ್ರಮುಖರಾದ ನಾರಾಯಣ ಹೆಗಡೆ ಮತ್ತೀಘಟ್ಟ, ಚಂದ್ರಶೇಖರ ಹೆಗಡೆ, ದಾಸನಕೊಪ್ಪಮಹಾಶಕ್ತಿ ಕೇಂದ್ರದ ಅಧ್ಯಕ್ಷ ಮಂಜುನಾಥ ಪಾಟೀಲ್ ದಾಸನಕೊಪ್ಪ, ರವಿ ದೇವಾಡಿಗ, ನಿರ್ಮಲಾ ಶೆಟ್ಟಿ ಸೇರಿದಂತೆ ಐವತ್ತಕ್ಕೂ ಹೆಚ್ಚು ಕಾರ್ಯಕರ್ತರು ಭಾಗಿಯಾಗಿದ್ದರು.

ADVERTISEMENT

Discussion about this post

Previous Post

ಅಲ್ಪಸಂಖ್ಯಾತರಿಗೆ ಪಿ.ಎಚ್.ಡಿ ಫೆಲೋಶಿಪ್

Next Post

ಹವ್ಯಕ ಕ್ಷೇಮಾಭಿವೃದ್ದಿ ಸಂಘದ ಮಾದರಿ ಕಾರ್ಯ

Mobile Media Network ಒಂದೇ ಸಂಸ್ಥೆ – ಹಲವು ಸೇವೆ

Preloader Image
1
2
8
7
6
5
4
3
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Terms of Service     Privacy Policy

Email: ukskofc@gmail.com

Developed by Naik & Co  © Copyright Publisher of Mobile Media Network

No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Developed by Naik & Co © Copyright Publisher of UKNews9

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😊✋