• Latest
Madanur The Gram Panchayat administration will rush to provide emergency assistance!

ಮದನೂರು: ತುರ್ತು ನೆರವಿಗೆ ಧಾವಿಸಿ ಬರಲಿದೆ ಗ್ರಾ ಪಂ ಆಡಳಿತ!

4 months ago
Lokayukta raids in Ankola too

ಅಂಕೋಲಾದಲ್ಲಿಯೂ ಲೋಕಾಯುಕ್ತ ದಾಳಿ

4 weeks ago
ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

4 weeks ago
ADVERTISEMENT
ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

4 weeks ago
ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

4 weeks ago
ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

4 weeks ago
Tuesday, October 21, 2025
uknews9.com
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
No Result
View All Result
uknews9.com
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
ADVERTISEMENT

ಮದನೂರು: ತುರ್ತು ನೆರವಿಗೆ ಧಾವಿಸಿ ಬರಲಿದೆ ಗ್ರಾ ಪಂ ಆಡಳಿತ!

uknews9.comby uknews9.com
in ನಮ್ಮೂರು - ನಮ್ಮ ಜಿಲ್ಲೆ
Madanur The Gram Panchayat administration will rush to provide emergency assistance!
ADVERTISEMENT

ಶಿಕ್ಷಣ, ಆರೋಗ್ಯ ಸೇರಿ ಇನ್ನಿತರ ಮೂಲಭೂತ ಸೌಕರ್ಯದಿಂದ ಸಮಸ್ಯೆ ಅನುಭವಿಸುತ್ತಿರುವವರಿಗೆ ಯಲ್ಲಾಪುರದ ಮದನೂರು ಗ್ರಾ ಪಂ ಅಧ್ಯಕ್ಷ ವಿಠ್ಠು ಶಳಕೆ ತುರ್ತು ನೆರವಿಗೆ ಬರುವ ಭರವಸೆ ನೀಡಿದ್ದಾರೆ. ಗ್ರಾಮ ಪಂಚಾಯದಲ್ಲಿ ನಡೆದ ಗ್ರಾಮ ಸಭೆಯಲ್ಲಿ ಹಲವು ವಿಷಯಗಳ ಚರ್ಚೆ ನಂತರ ಅವರು `ಯಾವುದೇ ಸಮಸ್ಯೆಯಿದ್ದರೂ ತಮ್ಮ ಗಮನಕ್ಕೆ ತನ್ನಿ’ ಎಂದು ಸಾರ್ವಜನಿಕರಿಗೆ ಸೂಚಿಸಿದ್ದಾರೆ.

Advertisement. Scroll to continue reading.
https://amzn.to/4moesz2 https://amzn.to/4moesz2 https://amzn.to/4moesz2
ADVERTISEMENT

ಎರಡು ವಾರದ ಹಿಂದೆ ಮದನೂರಿನಲ್ಲಿ ಗ್ರಾಮಸಭೆ ನಡೆಯಬೇಕಿತ್ತು. ಅಧಿಕಾರಿಗಳ ಅನುಪಸ್ಥಿತಿ ಕಾರಣ ಜೂನ್ 30ಕ್ಕೆ ಗ್ರಾಮಸಭೆ ಆಯೋಜಿಸಲಾಗಿತ್ತು. ಅಧಿಕಾರಿಗಳ ಗೈರಿನ ಬಗ್ಗೆ ಗ್ರಾಮ ಆಡಳಿತ ಹಿರಿಯ ಅಧಿಕಾರಿಗಳಿಗೆ ದೂರು ನೀಡಿದ್ದರು. ಹೀಗಾಗಿ ಜೂನ್ 30ರ ಗ್ರಾಮಸಭೆಗೆ ಬಹುತೇಕ ಎಲ್ಲಾ ಇಲಾಖೆಯವರು ಹಾಜರಿದ್ದು, ಜನರ ಸಮಸ್ಯೆ ಆಲಿಸಿದರು.

ADVERTISEMENT

ಮುಖ್ಯವಾಗಿ ವಸತಿ ಯೋಜನೆ, ಕೆರೆ ಅತಿಕ್ರಮಣ, ದಲಿತ ಸಮುದಾಯದವರಿಗೆ ಆದ ಅನ್ಯಾಯ, ಸ್ಮಶಾನ ಭೂಮಿ ಅಭಿವೃದ್ಧಿ, ಬಸ್ ಸೌಕರ್ಯದ ಕೊರತೆ, ಪಡಿತರ ಸಾಮಗ್ರಿ ವಿತರಣೆ ಸಮಸ್ಯೆ, ರಸ್ತೆ ಅಭಿವೃದ್ಧಿ ವಿಷಯವಾಗಿ ಚರ್ಚೆ ನಡೆಯಿತು. ಕೃಷಿ-ತೋಟಗಾರಿಕಾ ಇಲಾಖೆಯವರು ಆಗಮಿಸಿ ತಮ್ಮ ಇಲಾಖೆ ಚಟುವಟಿಕೆ ಹಾಗೂ ಸಬ್ಸಿಡಿ ವಿಷಯದ ಬಗ್ಗೆ ಸಭೆಗೆ ಮಾಹಿತಿ ನೀಡಿದರು. ಮಕ್ಕಳ ವಸತಿ ನಿಲಯ ಪ್ರವೇಶದ ಬಗ್ಗೆ ಹಿಂದುಳಿದ ವರ್ಗ ಹಾಗೂ ಸಮಾಜ ಕಲ್ಯಾಣ ಅಧಿಕಾರಿಗಳು ವಿವರಿಸಿದರು.

ಕಾಡು ಪ್ರಾಣಿ ಹಾವಳಿ ಹಾಗೂ ಪರಿಹಾರ ವಿತರಣೆ ಬಗ್ಗೆ ಸುದೀರ್ಘ ಚರ್ಚೆ ನಡೆದಿದ್ದು, ಅರಣ್ಯ ಇಲಾಖೆ ಕಾರ್ಯವೈಖರಿಯ ಬಗ್ಗೆ ಜನ ಅಸಮಧಾನವ್ಯಕ್ತಪಡಿಸಿದರು. ಅಕ್ರಮ ಮದ್ಯ ಮಾರಾಟದ ಬಗ್ಗೆ 112 ಸಹಾಯವಾಣಿಗೆ ಫೋನ್ ಮಾಡಿ ಮಾಹಿತಿ ನೀಡುವಂತೆ ಪೊಲೀಸರು ಮನವಿ ಮಾಡಿದರು. ಕಟ್ಟಡ ಕಾರ್ಮಿಕರ ಸಮಸ್ಯೆ ಹಾಗೂ ಹೆಸ್ಕಾಂ ಯೋಜನೆಗಳ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಯಿತು.

ಸಭೆಯ ಅಧ್ಯಕ್ಷತೆವಹಿಸಿದ್ದ ಮದನೂರು ಗ್ರಾ ಪಂ ಅಧ್ಯಕ್ಷ ವಿಠ್ಠು ಶಳಕೆ ಕೊನೆಗೆ ಜನತೆಗೆ ಭರವಸೆ ನೀಡಿದ್ದು, `ನಿಮ್ಮೊಂದಿಗೆ ನಾನಿದ್ದೇನೆ’ ಎಂಬ ವಿಶ್ವಾಸ ಮೂಡಿಸಿದರು. `ಗ್ರಾಮದ ಯಾವುದೇ ವ್ಯಕ್ತಿಗೆ ಯಾವುದೇ ಬಗೆಯ ಸಮಸ್ಯೆಯಾದರೂ ಗ್ರಾಮ ಪಂಚಾಯತ ತಂಡ ನೆರವಿಗೆ ಧಾವಿಸಲು ಸಿದ್ಧವಿದೆ’ ಎಂದು ಅವರು ಸಭೆಯಲ್ಲಿ ತಿಳಿಸಿದರು.

ADVERTISEMENT

Discussion about this post

Previous Post

ನಡುರಾತ್ರಿಯ ಕಾರ್ಯಾಚರಣೆ: ಅವರದ್ದು ತಪ್ಪಿಲ್ಲ.. ಇವರದ್ದು ತಪ್ಪಿಲ್ಲ.. ಬೈಕ್ ಕಳ್ಳ ಎಂದು ಭಾವಿಸಿದವ ನಿಜವಾಗಿಯೂ ಸಂಭಾವಿತ!

Next Post

ಜಾನುವಾರುಗಳ ಕಳ್ಳ ಸಾಗಾಟ: ದುಷ್ಟರಿಂದ ದೂರ ಓಡಿದ ಎಮ್ಮೆ ಸಾವು!

Mobile Media Network ಒಂದೇ ಸಂಸ್ಥೆ – ಹಲವು ಸೇವೆ

Preloader Image
1
2
8
7
6
5
4
3
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Terms of Service     Privacy Policy

Email: ukskofc@gmail.com

Developed by Naik & Co  © Copyright Publisher of Mobile Media Network

No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Developed by Naik & Co © Copyright Publisher of UKNews9

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😊✋