• Latest
Dharmasthala bus hits lorry Three dead many injured

ಲಾರಿಗೆ ಗುದ್ದಿದ ಧರ್ಮಸ್ಥಳ ಬಸ್ಸು: ಮೂರು ಸಾವು.. ಹಲವರಿಗೆ ನೋವು

2 months ago
Lokayukta raids in Ankola too

ಅಂಕೋಲಾದಲ್ಲಿಯೂ ಲೋಕಾಯುಕ್ತ ದಾಳಿ

4 weeks ago
ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

4 weeks ago
ADVERTISEMENT
ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

4 weeks ago
ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

4 weeks ago
ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

4 weeks ago
Wednesday, October 22, 2025
uknews9.com
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
No Result
View All Result
uknews9.com
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
ADVERTISEMENT

ಲಾರಿಗೆ ಗುದ್ದಿದ ಧರ್ಮಸ್ಥಳ ಬಸ್ಸು: ಮೂರು ಸಾವು.. ಹಲವರಿಗೆ ನೋವು

uknews9.comby uknews9.com
in ನಮ್ಮೂರು - ನಮ್ಮ ಜಿಲ್ಲೆ
Dharmasthala bus hits lorry Three dead many injured
ADVERTISEMENT

ಬಾಗಲಕೋಟೆಯಿಂದ ಧರ್ಮಸ್ಥಳದ ಕಡೆ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸು ಯಲ್ಲಾಪುರದಲ್ಲಿ ಅಪಘಾತಕ್ಕೀಡಾಗಿದೆ. ಈ ಅಪಘಾತದಲ್ಲಿ ಬಸ್ಸಿನಲ್ಲಿದ್ದ ಮೂವರು ಪ್ರಯಾಣಿಕರು ಸಾವನಪ್ಪಿದ್ದು, ಏಳು ಜನ ಗಂಭೀರ ಪ್ರಮಾಣದಲ್ಲಿ ಗಾಯಗೊಂಡಿದ್ದಾರೆ.

Advertisement. Scroll to continue reading.
https://amzn.to/4moesz2 https://amzn.to/4moesz2 https://amzn.to/4moesz2
ADVERTISEMENT

ಅಗಸ್ಟ 15ರಂದು ಈ ಬಸ್ಸು ಬಾಗಲಕೋಟೆಯಿಂದ ಹೊರಟಿತ್ತು. ಆಲಮಟ್ಟಿಯ ಯಮನಪ್ಪ ಮಾಗಿ ಅವರು ಬಸ್ಸನ್ನು ಓಡಿಸುತ್ತಿದ್ದರು. ನಸುಕಿನಲ್ಲಿ ಈ ಬಸ್ಸು ಯಲ್ಲಾಪುರ ತಾಲೂಕು ಪ್ರವೇಶಿಸಿತು. ಮಾವಳ್ಳಿ ಬಳಿಯ ಹಿಟ್ಟಿನಬೈಲಿನಲ್ಲಿ ಕೇರಳದ ಲಾರಿ ಹೆದ್ದಾರಿ ಅಂಚಿನಲ್ಲಿ ನಿಂತಿದ್ದು, ಆ ಬಸ್ಸು ಲಾರಿಗೆ ಡಿಕ್ಕಿಯಾಯಿತು. ಈ ಡಿಕ್ಕಿಯ ರಭಸಕ್ಕೆ ಬಸ್ಸಿನಲ್ಲಿದ್ದ ಬಾದಾಮಿ ತಾಲೂಕಿನ ಗುಳೆದಗುಡ್ಡ ಗ್ರಾಮದ ನಿಲವ್ವ ಹರದೊಳ್ಳಿ (40), ಜಾಲಿಹಾಳ ಗ್ರಾಮದ ಗಿರಿಜವ್ವಾ ಬೂದನ್ನವರ (30) ಸಾವನಪ್ಪಿದರು. ಅವರ ಜೊತೆ ಮತ್ತೊಬ್ಬ ಪುರುಷ ಸಹ ಅಸುನೀಗಿದ್ದು, ಅವರ ಹೆಸರು ಗೊತ್ತಾಗಲಿಲ್ಲ.

ADVERTISEMENT

ಇದರೊಂದಿಗೆ ಬಾಗಲಕೋಟೆಯ ಹುನಗುಂದದ ಚಿದಾನಂದ ರಮೇಶ ಕಿತ್ತಳಿ, ಅಮೀನಗಡದ ಮಲ್ಲಪ್ಪ ಯಮನಪ್ಪ ಕತ್ತಿ, ಮಂಜುಳಾ ಗಾಳೆಪ್ಪ ಹಳಬರ, ಮಲ್ಲಿಕಾರ್ಜುನ ಫಕೀರಪ್ಪ ಆಂದಲಿ, ದೇವಕಿ ಹನುಮಂತ ಬೆಳ್ಳಿ, ಗಿಡ್ಡನಾಯಕನಾಳದ ಸಮೀರಾಬೇಗಂ ಇಮಾಮ ಸಾಬ ಹೊಸಮನಿ, ರಕ್ಕಸಂಗಿಯ ಹನೀಫಾ ಮಹಮ್ಮದ್ ಅಲಿ ಬೇಗಂ ಸಹ ಗಂಭೀರ ಪ್ರಮಾಣದಲ್ಲಿ ಗಾಯಗೊಂಡರು. ಕೇರಳ ಮೂಲದ ಲಾರಿ ರಸ್ತೆಯಂಚಿನಲ್ಲಿ ಯಾವುದೇ ಲೈಟ್ ಇಲ್ಲದೇ ನಿಲ್ಲಿಸಿರುವುದು ಹಾಗೂ ಬಸ್ಸು ವೇಗವಾಗಿ ಬಂದಿರುವುದು ಈ ಅಪಘಾತಕ್ಕೆ ಕಾರಣ. ಅಪಘಾತದ ರಭಸಕ್ಕೆ ಬಸ್ ಒಂದು ಬಂದಿ ಸಂಪೂರ್ಣ ಜಖಂ ಆಗಿದೆ.

7 ಹಾಗೂ 12 ವರ್ಷದ ಚಿಕ್ಕ ಚಿಕ್ಕ ಮಕ್ಕಳಿಗೆ ಸಹ ಗಾಯವಾಗಿದ್ದು, ಅವರನ್ನು ಹುಬ್ಬಳ್ಳಿಯ ಕಿಮ್ಸ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ ಚಾಲಕ ಹಾಗೂ ನಿರ್ವಾಹಕ ಪ್ರಾಣ ಉಳಿಸಿಕೊಂಡಿದ್ದು, ಚಾಲಕನ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯಲ್ಲಾಪುರ ಸಿಪಿಐ ರಮೇಶ್ ಹಾನಾಪುರ, ಪಿಎಸ್‌ಐ ಯಲ್ಲಾಲಿಂಗ್ ಕುನ್ನೂರು ಹಾಗೂ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಗಾಯಾಳುಗಳನ್ನ ಹುಬ್ಬಳ್ಳಿ ಆಸ್ಪತ್ರೆಗೆ ಸಾಗಿಸುವಲ್ಲಿ ಸಿಪಿಐ ರಮೇಶ್ ಹಾನಾಪುರ ನೆರವಾದರು. ಮೃತ ದೇಹಗಳನ್ನು ಪಿಎಸ್‌ಐ ಯಲ್ಲಾಲಿಂಗ ಕುನ್ನೂರು ಅವರು ಶವಾಗಾರಕ್ಕೆ ಸಾಗಿಸುವ ಕಾರ್ಯದಲ್ಲಿ ಕಾಣಿಸಿಕೊಂಡರು.

`ಅವಸರವೇ ಅಪಘಾತಕ್ಕೆ ಕಾರಣ. ನಿಧಾನವಾಗಿ ವಾಹನ ಓಡಿಸಿ’

ADVERTISEMENT

Discussion about this post

Previous Post

ಕೂಲಿ ಕಾಸು ಕೇಳಿದವ ಕೊಲೆ ಮಾಡಿದ!

Next Post

ಭಟ್ಟರ ಮನೆಗೆ ಬಂದ ಚಿರತೆಗೆ ಸಿಕ್ಕಿಲ್ಲ ಮಾಂಸದ ಊಟ!

Mobile Media Network ಒಂದೇ ಸಂಸ್ಥೆ – ಹಲವು ಸೇವೆ

Preloader Image
1
2
8
7
6
5
4
3
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Terms of Service     Privacy Policy

Email: ukskofc@gmail.com

Developed by Naik & Co  © Copyright Publisher of Mobile Media Network

No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Developed by Naik & Co © Copyright Publisher of UKNews9

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😊✋