ದಾಂಡೇಲಿ :
ದಾಂಡೇಲಿಯ ರೋಟರಿ ಕ್ಲಬ್ ಸಮಾಜಮುಖಿಯಾಗಿ ಮಾಡುತ್ತಿರುವ ಸೇವೆ ಅತ್ಯಂತ ಶ್ಲಾಘನೀಯವಾಗಿದೆ. ಊರಿನ ಪ್ರಗತಿಯಲ್ಲಿ ಸಂಘ ಸಂಸ್ಥೆಗಳ ಪಾತ್ರ ಬಹುಮುಖ್ಯವಾಗಿದೆ. ಈ ನಿಟ್ಟಿನಲ್ಲಿ ದಾಂಡೇಲಿಯ ರೋಟರಿ ಕ್ಲಬ್ ಸಮುದಾಯ ಸೇವೆ ಮತ್ತು ಸಾರ್ವಜನಿಕ ಅನುಕೂಲಕ್ಕಾಗಿ ತನ್ನ ನಿರಂತರವಾಗಿ ಬದ್ಧತೆಯಿಂದ ಕಾರ್ಯನಿರ್ವಹಿಸುತ್ತಾ ಬಂದಿದೆ ಎಂದು ಶಾಸಕರು ಹಾಗೂ ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರಾದ ಆರ್.ವಿ.ದೇಶಪಾಂಡೆ ಅವರು ನುಡಿದರು.
ಅವರು ನಗರದ ಜೆ.ಎನ್.ರಸ್ತೆಯಲ್ಲಿ ರೋಟರಿ ಕ್ಲಬ್ ವತಿಯಿಂದ ನಿರ್ಮಿಸಲಾದ ಬಸ್ ಶೆಲ್ಟರನ್ನು ಲೋಕಾರ್ಪಣೆಗೊಳಿಸಿ ಮಾತನಾಡುತ್ತಿದ್ದರು. ಸಾಮಾಜಿಕ, ಆರೋಗ್ಯ, ಶೈಕ್ಷಣಿಕ ಕ್ಷೇತ್ರಕ್ಕೆ ರೋಟರಿ ಕ್ಲಬ್ ನಿರಂತರವಾಗಿ ತನ್ನದೇ ಆದ ರೀತಿಯಲ್ಲಿ ಕೊಡುಗೆಯನ್ನು ನೀಡುವ ಮೂಲಕ ಜನಸ್ನೇಹಿ ಸಂಸ್ಥೆಯಾಗಿ ಗಮನ ಸೆಳೆದಿದೆ ಎಂದರು. ದಾಂಡೇಲಿಯ ಸಾರ್ವಜನಿಕರಿಗೆ ಅನುಕೂಲವಾಗಲೆಂದು ನೂತನವಾಗಿ ಬಸ್ ಶೆಲ್ಟರನ್ನು ನಿರ್ಮಿಸಿರುವ ರೋಟರಿ ಕ್ಲಬ್ಬಿಗೆ ಹಾಗೂ ಕ್ಲಬ್ಬಿನ ಸರ್ವ ಪದಾಧಿಕಾರಿಗಳಿಗೆ ಮತ್ತು ಸದಸ್ಯರಿಗೆ ಕೃತಜ್ಞತೆಗಳನ್ನು ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ರೋಟರಿ ಕ್ಲಬ್ಬಿನ ಅಧ್ಯಕ್ಷ ಅಶುತೋಷ್ ಕುಮಾರ್ ರಾಯ್ ಅವರು ರೋಟರಿ ಕ್ಲಬ್ ಸಮಾಜಕ್ಕೆ ಉಪಯುಕ್ತವಾದ ಕಾರ್ಯ ಚಟುವಟಿಕೆಗಳಿಗೆ ಮೊದಲ ಆದ್ಯತೆಯನ್ನು ನೀಡಿ ಕಾರ್ಯನಿರ್ವಹಿಸುತ್ತಾ ಬಂದಿದೆ. ಇಲ್ಲಿ ಅತಿ ಅಗತ್ಯವಾಗಿ ಬೇಕಾಗಿದ್ದ ಬಸ್ ಶೆಲ್ಟರನ್ನು ರೋಟರಿ ಕ್ಲಬ್ಬಿನ ಪದಾಧಿಕಾರಿಗಳ ಹಾಗೂ ಸದಸ್ಯರ ಸಹಕಾರದಲ್ಲಿ ನಿರ್ಮಿಸಲಾಗಿದೆ ಎಂದರು.
ಈ ಸಂದರ್ಭದಲ್ಲಿ ರೋಟರಿ ಕ್ಲಬ್ ಕಾರ್ಯದರ್ಶಿ
ಮಿಥುನ ನಾಯಕ, ಇವೆಂಟ್ ಅಧ್ಯಕ್ಷ ಆರ್.ಪಿ. ನಾಯ್ಕ
ರೋಟರಿ ಕ್ಲಬ್ ಪ್ರಮುಖರಾದ ಗಣೇಶ ಕಾಮತ್, ರಾಜೇಶ ವೆರ್ಣೇಕರ, ರಾಹುಲ್ ಬಾವಾಜಿ, ಸೋಮಕುಮಾರ್ ಎಸ್, ರಾಜೇಶ ತಿವಾರಿ, ಅಭಿಷೇಕ್ ಕನ್ಯಾಡಿ, ಇಮಾಮ್ ಸರ್ವರ್, ರವಿಕುಮಾರ್ ಜಿ. ನಾಯಕ, ವೆಂಕಟೇಶ್ ಪಾಂಡೆ, ರಾಧೇಶ್ಯಾಮ್ ರಾಥಿ, ಕ್ಸೇವಿಯರ್ ಡಿ’ಸಿಲ್ವಾ, ಡಾ. ಜ್ಞಾನದೀಪ್ ಗಾಂವಕರ, ಡಾ. ವಿಜಯ್ ತೇಲಿ ಮೊದಲಾದವರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಶೈಲೇಶ್ ಪರಮಾನಂದ ಪೌರಾಯುಕ್ತ ವಿವೇಕ ಬನ್ನೆ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ ಹಲವಾಯಿ, ನಗರಸಭೆಯ ನಿಕಟ ಪೂರ್ವ ಅಧ್ಯಕ್ಷ ಅಷ್ಪಾಕ್ ಶೇಖ, ಪಿಎಸ್ಐ ಅಮೀನ್ ಅತ್ತಾರ ಹಾಗೂ ನಗರದ ಗಣ್ಯರನೇಕರು ಉಪಸ್ಥಿತರಿದ್ದರು.
