
ಶಿರಸಿ:
ಶಿರಸಿ ಮಾರಿಕಾಂಬಾ ಸರಕಾರಿ ಪ್ರೌಢಶಾಲೆಯಲ್ಲಿ ಉಪ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸುತ್ತಿದ್ದ ಯಜೇಶ್ವರ ಆರ್ ನಾಯ್ಕ ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಮೂಲತಹ ಸಿದ್ದಾಪುರ ತಾಲೂಕಿನ ಬೇಡ್ಕಣಿಯವರಾಗಿದ್ದ ಅವರು ಹಾವೇರಿಯಲ್ಲಿ ಮುಖ್ಯೋದ್ಯಾಪಕರಾಗಿ ಸೇವೆ ಸಲ್ಲಿಸಿದ ಬಳಿಕ ಶಿರಸಿ ಮಾರಿಕಾಂಬಾ ಪ್ರೌಢ ಶಾಲೆಯಲ್ಲಿ ಉಪ ಪ್ರಾಂಶುಪಾಲರಾಗಿ ಕಳೆದ ಒಂದು ವರ್ಷದಿಂದ ಸೇವೆ ಸಲ್ಲಿಸುತ್ತಿದ್ದರ ಮೃತ ದೇಹವನ್ನು ಮಾರಿಕಾಂಬಾ ಶಾಲೆಗೆ ತಂದು ಬಳಿಕ ಅವರ ಹೂಟ್ಟೂರಿಗೆ ಸಾಗಿಸಲಾಯಿತು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಶಿಕ್ಷಕರು ನೆಚ್ಚಿನ ಉಪ ಪ್ರಾಂಶುಪಾಲರಿಗೆ ಕಣ್ಣೀರಿನಲ್ಲಿ ಅಂತಿಮ ದರ್ಶನ ಪಡೆದರು. ಮೃತರು ಪತ್ನಿ ಈರ್ವರು ಪುತ್ರಿಯರು ಮತ್ತು ತಮ್ಮನ್ನು ಪ್ರೀತಿಸುತ್ತಿದ್ದ ವಿದ್ಯಾರ್ಥಿ ಸಮೂಹ ಮತ್ತು ಶಿಕ್ಷಕವೃಂದದವರನ್ನು ಬಂದು ಬಳಗದವರನ್ನು ಬಿಟ್ಟು ಅಗಲಿದ್ದಾರೆ.
ಸುದ್ದಿ ತಿಳಿಯುತ್ತಿದ್ದಂತೆ ಶಾಸಕ ಭೀಮಣ್ಣ ನಾಯ್ಕರು ಟಿ ಎಸ್ ಎಸ್ ಆಸ್ಪತ್ರೆಗೆ ತೆರಳಿ ಅಂತಿಮ ದರ್ಶನ ಪಡೆದರು.