
ಸಿದ್ದಾಪುರ:
ಸಾಗರದಿಂದ ಸಿದ್ದಾಪುರಕ್ಕೆ ಬರುತ್ತಿದ್ದ ಸಾರಿಗೆ ಬಸ್ ಚಾಲಕನ ನಿಯಂತ್ರಣ ತಪ್ಪಿ ಸಿದ್ದಾಪುರ ತಾಲೂಕಿನ ಗೋಳಗೊಡ ಬಳಿ ಪಲ್ಟಿಯಾದ ಘಟನೆ ಗುರುವಾರ ಸಂಜೆ ನಡೆದಿದೆ.
ಸುಮಾರು 20 ಅಡಿ ಆಳಕ್ಕೆ ಬಸ್ ಬಿದ್ದಿದೆ, ಬಸ್ ನಲ್ಲಿ ಸುಮಾರು 30 ಪ್ರಯಾಣಿಕರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಘಟನೆಯಲ್ಲಿ 3 ವಿದ್ಯಾರ್ಥಿಗಳಿಗೆ ಗಾಯವಾಗಿದ್ದು ಗಾಯಳುವನ್ನು ಸಿದ್ದಾಪುರ ಸರಕಾರಿ ಆಸ್ಪತ್ರೆಗೆ ದಾಖಳಿಸಲಾಗಿದೆ. ಅದೃಷ್ಟವಶಾತ್ ಭಾರಿ ದುರಂತ ತಪ್ಪಿದೆ.