
ಕಾರವಾರ:
ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರಿಯ ಆಶಯ ಹೇಳಿಕೊಂಡ ವಿದ್ಯಾರ್ಥಿನಿಗೆ ಕೂಡಲೇ ಅದರ ಅನುಭವವನ್ನು ನೀಡಿ, ಆಕೆ ಕಂಡಿರುವ ಕನಸಿಗೆ ಸ್ಪೂರ್ತಿ ಮತ್ತು ಪ್ರೇರಣೆ ನೀಡುವ ಮೂಲಕ ವಿದ್ಯಾರ್ಥಿನಿಯ ಭವಿಷ್ಯದ ಕನಸನ್ನು ನನಸು ಮಾಡಿದ ಅತ್ಯಂತ ಅಪರೂಪದ ಗಳಿಗೆಗೆ ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಸಾಕ್ಷಿಯಾಗಿದ್ದಾರೆ.
ಗುರುವಾರ ಜಿಲ್ಲಾಧಿಕಾರಿ ಕಚೇರಿಗೆ ವಿದ್ಯಾರ್ಥಿನಿಯರು ಬಂದು ಡಿಸಿಯೊಂದಿಗೆ ಮಾತುಕತೆ ನಡೆಸಿದರು, ಈ ವೇಳೆ ಡಾಕ್ಟರ್, ಲಾಯರ್, ಇಂಜಿನಿಯರ್ ಆಗುವ ಮತ್ತು ನೌಕಾಪಡೆ ಸೇರುವ ಬಗ್ಗೆ ತಿಳಿಸಿದರು ಆದರೆ ಅದರಲ್ಲಿದ್ದ ಯಲ್ಲಾಪುರ ಮೂಲಕ 8 ನೇ ತರಗತಿ ವಿದ್ಯಾರ್ಥಿನಿ ಸುದೀಪ್ತ ಶಂಕರ್ ಅತ್ತರವಾಲ್ ಮಾತ್ರ ನಾನು ನಿಮ್ಮ ಹಾಗೆ ಡಿಸಿ ಆಗಬೇಕು ಎಂದಳು. ತಕ್ಷಣ ತಮ್ಮ ಕುರ್ಚಿಯ ಮೇಲೆ ಕೂರಿಸಿ ಜಿಲ್ಲಾಧಿಕಾರಿಯಾಗಲು ಬೇಕಾದ ವಿದ್ಯಾಭ್ಯಾಸ ಹಾಗೂ ತಯಾರಿಯ ಬಗ್ಗೆ ವಿವರಿಸಿ ಮಾದರಿಯಾದರು.