
ಕಾರವಾರ
ಕಾಶ್ಮೀರದ ಪಹಲ್ಗಾಮ್ ನಲ್ಲಿ ಆದ ಭಯೋತ್ಪಾದಕ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳಲು ಭಾರತ ಹವಣಿಸುತ್ತಿದೆ. ಹೀಗಾಗಿ ದೇಶದ 244 ಕಡೆಗಳಲ್ಲಿ ಭರ್ಜರಿ ತಾಲೀಮು ನಡೆಯುತ್ತಿದೆ. ಮೇ 7 ರಂದು ಕಾರವಾರದಲ್ಲಿಯೂ ಆಪರೇಷನ್ ಅಭ್ಯಾಸ ಹೆಸರಿನಲ್ಲಿ ಮಾಂಕ್ ಡ್ರಿಲ್ ನಡೆಯಲಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ. ನಾರಾಯಣ ತಿಳಿಸಿದ್ದಾರೆ.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೇ ಏಳರಂದು ಕೇಂದ್ರ ಸರ್ಕಾರ ದೇಶಾದ್ಯಂತ ಮಾಕ್ ಡ್ರಿಲ್ ನಡೆಸಲು ಆದೇಶಿಸಿದೆ. ಈಗಾಗಲೇ ಬೇರೆ ರಾಜ್ಯಗಳಲ್ಲಿ ಮಾಕ್ ಡ್ರಿಲ್ ಮಾಡಲಾಗುತ್ತಿದೆ. ಕರ್ನಾಟಕದ ಮೂರು ಕಡೆಗಳಲ್ಲಿ ಮಾಕ್ ಡ್ರಿಲ್ ನಡೆಸಲು ಕೇಂದ್ರದಿಂದ ಸೂಚನೆ ಬಂದಿದೆ.
ಬೆಂಗಳೂರು, ಕಾರವಾರ ಮತ್ತು ರಾಯಚೂರಿನಲ್ಲಿ ಮಾಕ್ ಡ್ರಿಲ್ಗೆ ನಿರ್ಧರಿಸಲಾಗಿದೆ ಎಂದು ಅಗ್ನಿಶಾಮಕ ದಳದ ಡಿಜಿಪಿ ಪ್ರಶಾಂತ್ ಕುಮಾರ್ ಠಾಕೂರ್ ಹೇಳಿದ್ದಾರೆ. ಈ ಬಗ್ಗೆ ಕೇಂದ್ರ ಸರ್ಕಾರದಿಂದ ಸುತ್ತೋಲೆ ಬರಲಿದೆ ಎಂದು ಅವರು ಹೇಳಿದ್ದಾರೆ.
ಅಣಕು ಕಾರ್ಯಾಚರಣೆಯಲ್ಲಿ ಎನ್ಸಿಸ ಎನ್ಎಸ್ಎಸ್, ಸಿವಿಲ್ ಡಿಫೆನ್ಸ್ ಮತ್ತು ವೈದ್ಯರು ಭಾಗಿಯಾಗುತ್ತಾರೆ. ಪೊಲೀಸ್ ಠಾಣ, ಅಗ್ನಿಶಾಮಕ ದಳ ಠಾಣೆ ಸೇರಿ 35 ಕಡೆ ಸೈರನ್ ವ್ಯವಸ್ಥೆ ಇದೆ. ಅದರಲ್ಲಿ 32 ಕಡೆಗಳಲ್ಲಿ ಸೈರನ್ ಕಾರ್ಯ ನಿರ್ವಹಿಸುತ್ತಿವೆ. ಜನರು ಏನು ಮಾಡಬೇಕು, ಮಾಡಬಾರದು ಎಂಬ ಬಗ್ಗೆ ಕೇಂದ್ರ ಸರ್ಕಾರ ಹೊರಡಿಸುವ ಸುತ್ತೋಲೆಯಲ್ಲಿ ಗೊತ್ತಾಗಲಿದೆ ಎಂದು ತಿಳಿಸಿಸ್ದಾರೆ.