• Latest
Congress worker confined to Ankola!

ಅಂಕೋಲಾಗೆ ಸೀಮಿತಗೊಂಡ ಕಾಂಗ್ರೆಸ್ ಕಾರ್ಯಕಾರಣಿ!

2 months ago
Lokayukta raids in Ankola too

ಅಂಕೋಲಾದಲ್ಲಿಯೂ ಲೋಕಾಯುಕ್ತ ದಾಳಿ

4 weeks ago
ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

ರಾತ್ರಿಯಾದರೂ ಮನೆಗೆ ಮರಳದ ಲೋಕಾಯುಕ್ತರು!

4 weeks ago
ADVERTISEMENT
ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

ಚುನಾವಣೆ | ಗೆದ್ದರೂ ಕೇಸು-ಕೋರ್ಟು ಅಲೆದಾಡಿದ ಶಾಸಕ: ಇದೀಗ ಇನ್ನಷ್ಟು ನಿರಾಳ!

4 weeks ago
ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

ಶಿರಸಿ ಬಸ್ ನಿಲ್ದಾಣ: ಕಳ್ಳರಿದ್ದಾರೆ ಎಚ್ಚರಿಕೆ!

4 weeks ago
ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

ಕುಮಟಾವಾಸಿಗಳಿಂದ ಶಿರಸಿ ಚಲೋ ಅಭಿಯಾನ!

4 weeks ago
Wednesday, October 22, 2025
uknews9.com
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
No Result
View All Result
uknews9.com
No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
ADVERTISEMENT

ಅಂಕೋಲಾಗೆ ಸೀಮಿತಗೊಂಡ ಕಾಂಗ್ರೆಸ್ ಕಾರ್ಯಕಾರಣಿ!

uknews9.comby uknews9.com
in ನಮ್ಮೂರು - ನಮ್ಮ ಜಿಲ್ಲೆ
Congress worker confined to Ankola!
ADVERTISEMENT

ಉತ್ತರ ಕನ್ನಡ ಜಿಲ್ಲೆಯ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಾಯಿ ಗಾಂವ್ಕರ್ ಅವರು ತಮ್ಮ ಸ್ವ ಕ್ಷೇತ್ರದ ಕಾರ್ಯಕ್ರಮ ಆಯೋಜನೆಗೆ ಮಾತ್ರ ಸೀಮಿತವಾಗಿದ್ದಾರೆ.

Advertisement. Scroll to continue reading.
https://amzn.to/4moesz2 https://amzn.to/4moesz2 https://amzn.to/4moesz2
ADVERTISEMENT

ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿ ಶಿರಸಿಯಲ್ಲಿದ್ದರೂ ಜಿಲ್ಲಾ ಮಟ್ಟದ ಕಾರ್ಯಕ್ರಮಗಳು ಅಲ್ಲಿ ದೊಡ್ಡದಾಗಿ ನಡೆಯುತ್ತಿಲ್ಲ. ಉತ್ತರ ಕನ್ನಡ ಜಿಲ್ಲಾ ಕೇಂದ್ರ ಕಾರವಾರವಾಗಿದ್ದರೂ ಅಲ್ಲಿಯೂ ಕಾಂಗ್ರೆಸ್ ಸಭೆ ದೊಡ್ಡ ಪ್ರಮಾಣದಲ್ಲಿ ಆಗಿಲ್ಲ. ಉಸ್ತುವಾರಿ ಸಚಿವ ಮಂಕಾಳು ವೈದ್ಯ ಅವರ ಊರು ಭಟ್ಕಳದಲ್ಲಿಯೂ ಕಾಂಗ್ರೆಸ್ಸಿನ ಜಿಲ್ಲಾ ಮಟ್ಟದ ಕಾರ್ಯಕ್ರಮಗಳನ್ನು ಅಲ್ಲಿ ಆಯೋಜಿಸಲು ಅಧ್ಯಕ್ಷರು ಆಸಕ್ತರಾಗಿಲ್ಲ. ಹಿರಿಯ ಶಾಸಕ ಆರ್ ವಿ ದೇಶಪಾಂಡೆ ಅವರ ಹಳಿಯಾಳ ಕ್ಷೇತ್ರದಲ್ಲಿ ಸಹ ಕಾಂಗ್ರೆಸ್ ಜಿಲ್ಲಾ ಮಟ್ಟದ ಕಾರ್ಯಕಾರಣಿ ಸಭೆ ಆಯೋಜಿಸುತ್ತಿಲ್ಲ.

ADVERTISEMENT

ನಿರಂತರವಾಗಿ ಕಳೆದ ನಾಲ್ಕು ಜಿಲ್ಲಾಮಟ್ಟದ ಕಾಂಗ್ರೆಸ್ ಕಾರ್ಯಕ್ರಮಗಳು ಅಂಕೋಲಾದಲ್ಲಿ ನಡೆದಿದೆ. ದೂರದಿಂದ ಬರುವ ಕಾಂಗ್ರೆಸ್ ಕಾರ್ಯಕರ್ತರು ಇದರಿಂದ ಸಿಡಿಮಿಡಿಗೊಂಡಿದ್ದಾರೆ. `ಉತ್ತರ ಕನ್ನಡ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳ ಪೈಕಿ ಐದು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಬೆಂಬಲಿತ ಶಾಸಕರಿದ್ದಾರೆ. ಕುಮಟಾದಲ್ಲಿ ಮಾತ್ರ ಬಿಜೆಪಿ ಶಾಸಕರಿದ್ದು, ಅಂಕೋಲಾ ಬದಲು ಅಲ್ಲಾದರೂ ಜಿಲ್ಲಾಮಟ್ಟದ ಕಾರ್ಯಕಾರಣಿ ಸಭೆ ನಡೆದರೆ ಪಕ್ಷ ಸಂಘಟನೆಗೆ ಅನುಕೂಲ’ ಎಂಬುದು ಆ ಭಾಗದ ಕಾರ್ಯಕರ್ತರ ಮನದಾಳ. `ಉತ್ತರ ಕನ್ನಡ ಜಿಲ್ಲಾಕೇಂದ್ರ ಕಾರವಾರ ಆಗಿದ್ದರಿಂದ ಅಲ್ಲಾದರೂ ಕಾಂಗ್ರೆಸ್ ಸಭೆ ನಡೆಸಬೇಕು. ಅದನ್ನು ಬಿಟ್ಟು ಅಂಕೋಲಾಗೆ ಮಾತ್ರ ಸೀಮಿತವಾಗಿರುವುದು ಸರಿಯಲ್ಲ’ ಎಂಬುದು ಅನೇಕರ ಮಾತು.

`ಉತ್ತರ ಕನ್ನಡ ಜಿಲ್ಲೆಗೆ ಯಲ್ಲಾಪುರ ಸಹ ಮಧ್ಯವರ್ತಿ ಸ್ಥಳ. ಎಲ್ಲಾ ಭಾಗದ ಕಾರ್ಯಕರ್ತರಿಗೂ ಇಲ್ಲಿ ಬರುವುದು ಅನುಕೂಲ. ಜೊತೆಗೆ ಬಿಜೆಪಿಯಿಂದ ಗೆದ್ದಿದ್ದ ಶಾಸಕ ಶಿವರಾಮ ಹೆಬ್ಬಾರ್ ಇದೀಗ ಕಾಂಗ್ರೆಸ್ ಕಡೆ ಒಲವು ತೋರಿದ್ದರಿಂದ ಯಲ್ಲಾಪುರದಲ್ಲಿಯೂ ಕಾಂಗ್ರೆಸ್ ಸಭೆ ಆಯೋಜನೆ ಮೂಲಕ ಪಕ್ಷ ಸಂಘಟನೆಗೆ ಪೂರಕ ವಾತಾವರಣವಿದೆ’ ಎನ್ನುವವರು ಹೆಚ್ಚಿಗೆ ಇದ್ದಾರೆ.

`ಶಿವರಾಮ ಹೆಬ್ಬಾರ್ ಪುತ್ರ ವಿವೇಕ ಹೆಬ್ಬಾರ್ ಸಹ ಕೆಪಿಸಿಸಿಯ ಉನ್ನತ ಹುದ್ದೆಯಲ್ಲಿದ್ದು, ಮುಂಡಗೋಡು ಭಾಗದಲ್ಲಿ ಹಿಡಿತಹೊಂದಿದ್ದಾರೆ. ಹೀಗಾಗಿ ಮುಂಡಗೋಡದಲ್ಲಿಯೂ ಪಕ್ಷ ಸಂಘಟನೆಗಾಗಿ ಕಾರ್ಯಕಾರಣಿ ಸಭೆ ನಡೆಸಬೇಕು’ ಎಂಬ ಮಾತು ಕೇಳಿ ಬಂದಿದೆ. `ಜಿಲ್ಲೆಯ 12 ತಾಲೂಕುಗಳಲ್ಲಿಯೂ ಒಂದೊoದು ಸಭೆ ನಡೆಸಿದರೂ ಸಮಸ್ಯೆ ಇಲ್ಲ. ಜಿಲ್ಲಾಧ್ಯಕ್ಷರ ಊರಾದ ಅಂಕೋಲಾವನ್ನು ಮಾತ್ರ ಕೇಂದ್ರವನ್ನಾಗಿಸಿರಿಸಿಕೊAಡು ಜಿಲ್ಲಾಮಟ್ಟದ ಸಭೆ ನಡೆಸುವುದು ಸಮಂಜಸವಲ್ಲ’ ಎಂಬುದು ದೂರದೂರಿನ ಕಾರ್ಯಕರ್ತರ ಅಭಿಮತ. ಈ ಹಿಂದೆ ಅಂಕೋಲಾದ ಹೊಟೇಲ್ ಒಂದರಲ್ಲಿ ಕಾಂಗ್ರೆಸ್ ಕಾರ್ಯಕಾರಣಿ ಸಭೆ ನಡೆದಾಗ ಅಲ್ಲಿ ನಾಯಕರೇ ಬಂದಿರಲಿಲ್ಲ. ಕಾರ್ಯಕರ್ತರು ಸಹ ದೊಡ್ಡ ಪ್ರಮಾಣದಲ್ಲಿರಲಿಲ್ಲ. ಹೀಗಾಗಿ ಸಭೆಗಾಗಿ ಬಂದಿದ್ದ ಹಿರಿಯ ನಾಯಕರು ಅಸಮಧಾನವ್ಯಕ್ತಪಡಿಸಿ ಗರಂ ಆಗಿದ್ದರು. ಅದಾಗಿಯೂ ಮತ್ತೆ ಅಂಕೋಲಾದಲ್ಲಿಯೇ ಕಾರ್ಯಕಾರಣಿ ಸಭೆ ನಡೆಸಲಾಗಿದೆ.

ಶಿರಸಿಗೆ ಬರಲಿದ್ದಾರೆ ಸೊರಕೆ:
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಾಯಿ ಗಾಂವ್ಕರ್ ಅವರು ಅಂಕೋಲಾದಲ್ಲಿ ಮಾತ್ರ ನಿರಂತರ ಕಾಂಗ್ರೆಸ್ ಸಭೆ ಆಯೋಜಿಸುತ್ತಿದ್ದರೂ ಅದನ್ನು ಕೆಪಿಸಿಸಿ ಗಂಭೀರವಾಗಿ ಪರಿಗಣಿಸಿಲ್ಲ. ಹೀಗಾಗಿ ಕರ್ನಾಟಕ ಪ್ರದೇಶ ಕಾಂಗ್ರೇಸ್ ಪ್ರಚಾರ ಸಮಿತಿ ಅಧ್ಯಕ್ಷರೂ ಆಗಿರುವ ಮಾಜಿ ಸಚಿವ ವಿನಯಕುಮಾರ ಸೊರಕೆ ಅಗಸ್ಟ 19ರಂದು ಶಿರಸಿಗೆ ಬರುತ್ತಿದ್ದಾರೆ. ಆ ದಿನ ಬೆಳಗ್ಗೆ ಅವರು ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಲಿದ್ದು, ಪಕ್ಷದ ಸಂಘಟನೆ ಹಾಗೂ ಜಿಲ್ಲಾ ಮತ್ತು ತಾಲೂಕಾ ಪಂಚಾಯತ್ ಚುನಾವಣೆಯ ಪೂರ್ವಭಾವಿ ಕಾರ್ಯಯೋಜನೆ ಕುರಿತು ಚರ್ಚಿಸಲಿದ್ದಾರೆ.

ADVERTISEMENT

Discussion about this post

Previous Post

ಭಟ್ಟರ ಮನೆಗೆ ಬಂದ ಚಿರತೆಗೆ ಸಿಕ್ಕಿಲ್ಲ ಮಾಂಸದ ಊಟ!

Next Post

ಪುಂಡ ಪೋಕರಿಗಳಿಂದ ರಕ್ಷಣೆ: ಮರಳಿ ಮನೆ ಸೇರಿದ ಬಾಲಕಿ

Mobile Media Network ಒಂದೇ ಸಂಸ್ಥೆ – ಹಲವು ಸೇವೆ

Preloader Image
1
2
8
7
6
5
4
3
ADVERTISEMENT
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ
  • Home
  • ಲೇಖನ
  • ವಾಣಿಜ್ಯ
  • ಜನಮತ‌
  • ನಮ್ಮೂರು – ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Terms of Service     Privacy Policy

Email: ukskofc@gmail.com

Developed by Naik & Co  © Copyright Publisher of Mobile Media Network

No Result
View All Result
  • ಲೇಖನ
  • ವಾಣಿಜ್ಯ
  • ನಮ್ಮೂರು – ನಮ್ಮ ಜಿಲ್ಲೆ
  • ಜನಮತ‌
  • ನಿಮ್ಮ ಭವಿಷ್ಯ-ನಿಮ್ಮ ಕೈಯಲ್ಲಿ
  • ಸಿನಿಮಾ
  • ವಿಡಿಯೋ

Developed by Naik & Co © Copyright Publisher of UKNews9

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😊✋