ಹೊನ್ನಾವರದ ಇಡಗುಂಜಿಯ ವಿನಾಯಕ ದೇವಾಲಯದಲ್ಲಿ ವಿವಿಧ ಕೆಲಸಕ್ಕಾಗಿ ಜನ ಬೇಕಾಗಿದ್ದು, ಯೋಗ್ಯರ ಹುಡುಕಾಟ ನಡೆದಿದೆ.
ಇಲ್ಲಿ ಮಣಿಗಾರರು, ಗುಮಾಸ್ತರು, ಮುಖ್ಯ ಅಡುಗೆ ತಯಾರಕರು, ಸಹಾಯಕ ಅಡುಗೆಯವರು ಹಾಗೂ ಊಟ ಬಡಿಸುವವರು ಬೇಕಾಗಿದ್ದಾರೆ. ಇದರೊಂದಿಗೆ ಭದ್ರತಾ ಸಿಬ್ಬಂದಿ, ಸ್ವಚ್ಛತೆಗಾರರು, ಕಛೇರಿ ಪರಿಚಾರಕ, ಮುಸುರೆ ಒರೆಸುವವರು ಹಾಗೂ ಸ್ಥಾವೇಂಜರ್ ಹುದ್ದೆಗಳು ಖಾಲಿ ಇದೆ. ಈ ಎಲ್ಲಾ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 18 ಕೊನೆದಿನ.
18 ವರ್ಷ ಮೇಲ್ಪಟ್ಟವರು ಹಾಗೂ 45 ವರ್ಷದ ಒಳಗಿನವರು ಅರ್ಜಿ ಹಾಕಬಹುದು. ಮುಖ್ಯ ಅಡುಗೆ ತಯಾರಕರು, ಸಹಾಯಕ ಅಡುಗೆಯವರು, ಊಟ ಬಡಿಸುವವರು, ಸ್ವಚ್ಛತೆಗಾರರು, ಭೋಜನಾಲಯದ ಮುಸುರೆ ಒರೆಸುವವರ ಹುದ್ದೆಗಳಿಗೆ ಕಾರವಾರದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲದಲ್ಲಿ ಸೆಪ್ಟಂಬರ್ 22ರಂದು ಬೆಳಗ್ಗೆ 10 ಗಂಟೆಗೆ ಸಂದರ್ಶನ ನಡೆಯಲಿದೆ. ಸೆಪ್ಟಂಬರ್ 29ರಂದು ಬೆಳಗ್ಗೆ 10 ಗಂಟೆಗೆ ಮಣಿಗಾರರು, ಗುಮಾಸ್ತರು, ಭದ್ರತಾ ಸಿಬ್ಬಂದಿ ಮತ್ತು ಕಚೇರಿ ಪರಿಚಾರಕ ಹುದ್ದೆಗಳ ಸಂದರ್ಶನ ನಡೆಯಲಿದೆ.
ಸಂದೇರ್ಶನಕ್ಕೆ ಆಯ್ಕೆಯಾದವರಿಗೆ ಸೂಚನಾ ಪತ್ರ ನೀಡುವುದಿಲ್ಲ. ಸೂಚನೆಗಳು ಜಿಲ್ಲಾ ನ್ಯಾಯಾಲಯ ಹಾಗೂ ಇಡಗುಂಜಿಯ ಶ್ರೀ ವಿನಾಯಕ ದೇವಾಲಯದ ಸೂಚನ ಫಲಕದಲ್ಲಿರುತ್ತದೆ.
S News Digitel
ಕ್ರೀಡೆಯಲ್ಲಿ ಸಾಧನೆ: ಏಕಲವ್ಯ ಪ್ರಶಸ್ತಿಗೆ ಹೀಗೆ ಮಾಡಿ!
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 2023ನೇ ಸಾಲಿನ ಕ್ರೀಡಾ ಕ್ಷೇತ್ರದಲ್ಲಿ ಅಸಾಧಾರಣ ಪ್ರತಿಭೆಯನ್ನು ತೋರಿರುವ ಪ್ರತಿಭಾನ್ವಿತ ಕ್ರೀಡಾಪಟುಗಳಿಗೆ ಏಕಲವ್ಯ ಪ್ರಶಸ್ತಿ ನೀಡಲು ಅರ್ಹ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಕ್ರೀಡಾಪಟುಗಳು ಅರ್ಜಿ ನಮೂನೆ ಹಾಗೂ ಮಾರ್ಗಸೂಚಿಗಳನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕಚೇರಿಯಿಂದ ಪಡೆದು, ಅಗತ್ಯ ದಾಖಲೆಗಳೊಂದಿಗೆ ಸೆಪ್ಟಂಬರ್ 16ರ ಒಳಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ:08382-201824 ಹಾಗೂ ಮೊಬೈಲ್ ಸಂಖ್ಯೆ: 9480886551ಕ್ಕೆ ಕಚೇರಿ ವೇಳೆಯಲ್ಲಿ ಸಂಪರ್ಕಿಸಿ.
S News Digitel
ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿಗೆ ಅರ್ಜಿ ಆಹ್ವಾನ
ಪ್ರಸಕ್ತ ಸಾಲಿನ ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿ ಯೋಜನೆಯಡಿ ಕರ್ನಾಟಕ ರಾಜ್ಯದ ಕ್ರೀಡಾ ಪೋಷಕರನ್ನು ಗುರುತಿಸಿ ಗೌರವಿಸಲು `ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿ\’ಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಕ್ರೀಡಾ ಪೋಷಕರು ಅರ್ಜಿ ನಮೂನೆ ಹಾಗೂ ಮಾರ್ಗಸೂಚಿಗಳನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕಚೇರಿಯಿಂದ ಪಡೆದು ಅಗತ್ಯ ದಾಖಲೆಗಳೊಂದಿಗೆ ಸೆಪ್ಟಂಬರ್ 16ರೊಳಗಾಗಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ:08382-201824 ಹಾಗೂ ಮೊಬೈಲ್ ಸಂಖ್ಯೆ: 9480886551ಯನ್ನು ಸಂಪರ್ಕಿಸಿ.
S News Digitel
ಸ್ನಾತಕೋತ್ತರ ಪದವಿಗೆ ಪ್ರವೇಶ
ಕಾರವಾರದ ಸರಕಾರಿ ಕಲಾ ಮತ್ತು ವಿಜ್ಞಾನ ಕಾಲೇಜಿನಲ್ಲಿ 2024-2025 ನೇ ಸಾಲಿನಲ್ಲಿ ಎಂ.ಎಸ್ಸಿ-ಕೈಗಾರಿಕಾ ರಸಾಯನಶಾಸ್ತ್ರ, ಎಂ.ಎಸ್ಸಿ-ಪ್ರಾಣಿಶಾಸ್ತ್ರ, ಎಂ.ಎ-ಕನ್ನಡ ಸ್ನಾತಕೋತ್ತರ ಪದವಿ ಕೋರ್ಸಗಳ ಪ್ರವೇಶಾತಿ ಪ್ರಾರಂಭವಾಗಿದೆ.
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: ಡಾ. ಜ್ಯೋತಿ ಕಿಣಿ ಹೆಚ್ 8618081529, ಬೃಂದಾ ಎನ್ 6361349072 ಸಂಪರ್ಕಿಸಿ.
S News Digitel
ಶೈಕ್ಷಣಿಕ ಶುಲ್ಕ ಮರುಪಾವತಿಗಾಗಿ ಅರ್ಜಿ ಆಹ್ವಾನ
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ಅಧಿಕೃತ ರಾಷ್ಟಿçÃಯ ಕ್ರೀಡಾ ಸಂಸ್ಥೆಗಳು ಅಯೋಜಿಸುವ ರಾಷ್ಟç ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ಪದಕ ಪಡೆದ ಮತ್ತು ಅಂತರಾಷ್ಟಿçÃಯ ಮಟ್ಟದ ಕ್ರೀಡಾಕೂಟಗಳಿಗೆ ಭಾರತ ಸರ್ಕಾರದಿಂದ ನಿಯೋಜಿಸಲ್ಪಟ್ಟ ತಂಡದಲ್ಲಿ ಭಾಗವಹಿಸಿ ಉತ್ತಮ ಸಾಧನೆ ಮಾಡಿದ ರಾಜ್ಯದ ಕ್ರೀಡಾಪಟುಗಳ ಶೈಕ್ಷಣಿಕ ಶುಲ್ಕ ಮರುಪಾವತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಕ್ರೀಡಾ ಪಟುಗಳು ಸೆಪ್ಟಂಬರ್ 25ರೊಳಗಾಗಿ ಅರ್ಜಿ ಸಲ್ಲಿಸಬಹುದು. ಅರ್ಜಿ ನಮೂನೆ , ಮಾರ್ಗಸೂಚಿಗಳನ್ನು ಹಾಗೂ ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ:08382-201824 ಹಾಗೂ ಮೊಬೈಲ್ ಸಂಖ್ಯೆ: 9480886551ಗೆ ಸಂಪರ್ಕಿಸಿ.
S News Digitel