ಶಿರಸಿ: ಬಿಸಲಕೊಪ್ಪ ಕುತ್ಬುದ್ಧೀನ್ ವಡಗೇರಿ ಎಂಬ 28 ವರ್ಷದ ಯುವಕ ಸಾಲ ತೀರಿಸಲಾಗದೇ ಸಾವನಪ್ಪಿದ್ದಾನೆ.
ವಡಗೇರಿಯಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದ ಈತ ವಿಪರೀತ ಸಾಲ ಮಾಡಿಕೊಂಡಿದ್ದ. ಸಾಲ ತೀರಿಸಲಾಗುತ್ತಿಲ್ಲ ಎಂದು ನೊಂದಿದ್ದ. ಇದೇ ನೋವಿನಲ್ಲಿ ಸೆ 17ರಂದು ರಾತ್ರಿ ಈತ ಕಳೆನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ. ಮನೆಯ ಹಿತ್ತಿಲಿನಲ್ಲಿ ಅಸ್ವಸ್ಥನಾಗಿ ಬಿದ್ದವನನ್ನು ಸ್ಥಳೀಯರು ಮಾರಿಕಾಂಬಾ ಆಸ್ಪತ್ರೆಗೆ ದಾಖಲಿಸಿದ್ದರು.
ಅಲ್ಲಿಂದ ಮುಂದೆ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ\’ಗೆ ಸಾಗಿಸಲಾಯಿತು. ಅಲ್ಲಿಯೂ ಒಗ್ಗದ ಕಾರಣ ಮಂಗಳೂರಿಗೆ ಕರೆದುಕೊಂಡು ಹೋಗುವ ಪ್ರಯತ್ನ ನಡೆದಿದ್ದು, ತೀವೃ ಅಸ್ವಸ್ಥಗೊಂಡ ಹಿನ್ನಲೆ ಶಿರಸಿ ಪಂಡಿತ್ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಆದರೆ, ಸೆ 18ರ ಮಧ್ಯಾಹ್ನ ಈತ ಸಾವನಪ್ಪಿದ ಬಗ್ಗೆ ವೈದ್ಯರು ಘೋಷಿಸಿದರು. ಬನವಾಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.