
ಅಂಕೋಲಾ:
ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಅಂಕೋಲ ತಾಲೂಕಿನ ಹೊನ್ನಳ್ಳಿಯ ತುಳಸಿ ಗೌಡ (86) ರವರು ವಯೋಸಹಜತೆಯಿಂದ ಇಂದು ಸಂಜೆ ದೈವಾದೀನರಾಗಿದ್ದಾರೆ.
ವರ್ಷಕ್ಕೆ ಮೂವತ್ತು ಸಾವಿರಕ್ಕೂ ಹೆಚ್ಚು ಸಸಿಗಳನ್ನು ತುಳಸಿ ಗೌಡ ರವರು ನೆಟ್ಟು ಬೆಳಸುತಿದ್ದರು. ಚಿಕ್ಕ ವಯಸ್ಸಿನಲ್ಲಿ ಗಂಡನನ್ನು ಕಳೆದುಕೊಂಡು ಇಬ್ಬರು ಮಕ್ಕಳನ್ನು ಸಾಕಲು ಅರಣ್ಯ ಇಲಾಖೆಯಲ್ಲಿ ದಿನಗೂಲಿ ಕೆಲಸಕ್ಕೆ ಸೇರಿದ ಇವರು ಅಲ್ಲಿಯೇ ಗಿಡಗಳ ಆರೈಕೆ ಪೋಷಣೆ ಮಾಡುತ್ತಾ ಹಲವು ಕಾಡು ಗಿಡಗಳ ಬೀಜ ಸಂಗ್ರಹಿಸಿ ಸಸಿಗಳನ್ನು ಮಾಡಿ ಕಾಡಿನಲ್ಲಿ ನೆಡುವ ಮೂಲಕ ಸದ್ದಿಲ್ಲದೇ ಹಸಿರು ಕ್ರಾಂತಿ ಮಾಡಿದರು. ಹಾಲಕ್ಕಿ ಜನಾಂಹದಲ್ಲಿ ಹುಟ್ಟಿದ ಇವರು ಯಾವುದೇ ಪ್ರತಿಪಲಾಕ್ಷೆ ಇಲ್ಲದೇ ಹಸಿರು ಬೆಳಸುವ ಕಾಯಕ ಮಾಡುತ್ತಾ ಸಾಗಿದರು. ಅಳವಿನಂಚಿನ ಸಸ್ಯ ಗಳನ್ನು ಬೆಳಸಿದ ಕೀರ್ತಿ ಇವರದ್ದು ಇವರ ಸಾಧನೆ ಗುರುತಿಸಿ ಕೇಂದ್ರ ಸರ್ಕಾರ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿದೆ.
ಅವರು ಮಗ ಸುಬ್ರಾಯ ಮತ್ತು ಮಗಳು ಸೋಮಿ ಇಬ್ಬರು ಮಕ್ಕಳು ಹಾಗೂ ನಾಲ್ಕು ಜನ ಮೊಮ್ಮಕ್ಕಳನ್ನು ಅಗಲಿದ್ದಾರೆ.