
ಕಾರವಾರ:
ಕಾಶ್ಮೀರ ದಲ್ಲಿ ಪ್ರವಾಸಿಗರ ಮೇಲೆ ಉಗ್ರರ ನರಮೇಧ ನಡೆಸಿದ ಬೆನ್ನಲ್ಲೇ ಕರ್ನಾಟಕ ಕಾಶ್ಮೀರ ಎಂದೇ ಹೆಸರಾಗಿರುವ ಪ್ರವಾಸಿಗರ ಮೆಚ್ಚಿನ ಉತ್ತರ ಕನ್ನಡ ಜಿಲ್ಲೆಯಲ್ಲಿ ನಿರಂತರ ರಜೆ ಹಿನ್ನಲೆಯಲ್ಲಿ ಬಿಗು ತಪಾಸಣೆಯನ್ನು ಕೈಗೊಳ್ಳಲಾಗಿದೆ.
ಜಿಲ್ಲಾ ಪೊಲೀಸರು,ಕರಾವಳಿ ಕಾವಲು ಪಡೆ, ಭಾರತೀಯ ತಟರಕ್ಷಕ ದಳ ಅಲರ್ಟ ಆಗಿದ್ದು ಎಲ್ಲೆಡೆ ತಪಾಸಣೆ ಕೈಗೊಳ್ಳುತ್ತಿದೆ. ಜಿಲ್ಲೆಯ ಮುರುಡೇಶ್ವರ, ಗೋಕರ್ಣ ಪ್ರವಾಸಿ ಸ್ಥಳಗಳಲ್ಲಿ ಜಿಲ್ಲಾ ಪೊಲೀಸರು ಪ್ರವಾಸಿಗರ ಮಾಹಿತಿ ಕಲೆ ಹಾಕುತಿದ್ದು , ಕಡ್ಡಾಯವಾಗಿ ಸಿಸಿ ಕ್ಯಾಮರಾ ಅಳವಡಿಸಿ ಬರುವ ಪ್ರವಾಸಿಗರ ಮಾಹಿತಿ ಪಡೆಯಲು ಸೂಚಿಸಿದೆ. ಇನ್ನು ಕರಾವಳಿ ಕಾವಲುಪಡೆ ಹಾಗೂ ಭಾರತೀಯ ತಟರಕ್ಷಣಾ ಪಡೆಗಳು ಕರಾವಳಿ ಭಾಗದಲ್ಲಿ ಶತ್ರಗಳು ಒಳ ನುಗ್ಗದಂತೆ ತಡೆಯಲು ಬೋಟುಗಳ ತಪಾಸಣೆ ನಡೆಸುತಿದ್ದು ಕರಾವಳಿ ಭಾಗದಲ್ಲಿ ಬಿಗಿ ತಪಾಸಣೆ ಕೈಗೊಂಡಿದೆ.